Wednesday, July 23, 2008

ಫಸ್ಟ್ ಹಾಫ್ ನೋಡಬೇಕು ಅಂದಿದ್ರು ವ್ಯಾಸರು

ಆಗತಾನೆ ಬಂದಿದ್ದ "ಫಸ್ಟ್ ಹಾಫ್" ಪುಸ್ತಕವನ್ನ ಪತ್ರಕರ್ತ ಗೆಳೆಯ ಶ್ರೀಕಂಠ ಒಂದು ಎಕ್ಸೈಟ್ಮೆಂಟ್ನೊಂದಿಗೆ ತಿರುವಿ ಹಾಕುತ್ತಿದ್ದರು. ಆ ಪುಸ್ತಕದ ಬಗ್ಗೆ ನನಗಿಂತ ಅವರಿಗೇ ಹೆಚ್ಚು ಕುತೂಹಲವಿತ್ತು. ಹಾಗಾಗಿ ಪುಸ್ತಕದ ಮೊದಲ ಕಾಪಿ ಬಂತು ಅನ್ನುತ್ತಿದ್ದಂತೆ ನನಗೆ ತೋರಿಸಿಯೇ ನೀವು ಹೋಗಬೇಕು ಅಂತ ಹಟ ಹಿಡಿದಿದ್ದರು. ಇಡೀ ಪುಸ್ತಕ ನೋಡಿ ಆದ ಮೇಲೆ ಅವರು ಹೇಳಿದ್ದಿಷ್ಟು... ಈ ತರಹದ ಪುಸ್ತಕ ಇದುವರೆಗೂ ಬಂದಿಲ್ಲ. ನೀವು ಅದ್ಭುತವಾದ ಕೆಲಸ ಮಾಡಿದ್ದೀರಿ ಅಂತ. ಅವರ ಪ್ರೀತಿ ದೊಡ್ಡದು.
ಆದರೆ ವಿಪಯರ್ಾಸ ನೋಡಿ. ವ್ಯಾಸರು ರವಿ ಬೆಳಗೆರೆ ಬಗ್ಗೆ ಅತ್ಯಂತ ಪ್ರೀತಿಯಿಂದ ಬರೆದುಕೊಟ್ಟಿದ್ದ ಲೇಖನವನ್ನ ತಿರುವಿಹಾಕುತ್ತಿದ್ದಾಗಲೇ ಅವರ ಸಾವಿನ ಸುದ್ದಿ ಬರಸಿಡಿಲಿನಂತೆ ಬಂತು. ಮಧ್ಯಾಹ್ನ 12.20ಕ್ಕಷ್ಟೇ ಫೋನ್ ಮಾಡಿ ವಿಠ್ಠಲ ಗಟ್ಟಿ ಉಳಿಯ ಅವರ ಜೊತೆ ನಗುನಗುತ್ತಾ ಮಾತಾಡಿದ್ದರು. ನಮ್ಮನ್ನೆಲ್ಲ ಯಥಾಪ್ರಕಾರ ವಿಚಾರಿಸಿದ್ದರು. ಓ ಮನಸೇ ಬೇಗ ಕೊಡಿ. ಯಾಕೆ ಲೇಟ್ ಮಾಡ್ತೀರಿ ಅಂದಿದ್ದರು. ನಾನು ಫಸ್ಟ್ ಹಾಫ್ ಪುಸ್ತಕದ ರಿಲೀಸಿಂಗ್ ಫಂಕ್ಷನ್ಗೆ ಬರ್ತೇನೆ ಅಂದಿದ್ದರಂತೆ. ಇನ್ನೆಲ್ಲಿ ಬರೋದು? ಯಾಕೋ ಗೊತ್ತಿಲ್ಲ ಹಿರಿಯರೆನಿಸಿಕೊಂಡಿದ್ದವರೆಲ್ಲ ಒಬ್ಬೊಬ್ಬರಾಗಿ ಹೇಳದೆ ಕೇಳದೆ ಹೊರಟುಹೋಗುತ್ತಿದ್ದಾರೆ. ನನ್ನ ಅತ್ಯಂತ ಪ್ರೀತಿಯ ರಾಮ್ದಾಸ್ ಹೋದಾಗಲಂತೂ ನನ್ನನ್ನೊಂದು ಶೂನ್ಯ ಆವರಿಸಿಕೊಂಡಿತ್ತು. ಮೊನ್ನೆ ಅವರ ಕೊನೆಯ ಫೋಟೋ ಆಕಸ್ಮಿಕವಾಗಿ ಸಿಕ್ಕಿತು. ಕಣ್ಣು ಒತ್ತರಿಸಿಕೊಂಡು ಬಂತು. ಒಮ್ಮೆ ಮೂಡುಬಿದಿರೆಯಲ್ಲಿ ಸಿಕ್ಕು ಇಷ್ಟು ಎತ್ತರ ಬೆಳೆದುಬಿಟ್ಟಿದ್ದೀರಾ? ಗುರುತೇ ಸಿಗುತ್ತಿಲ್ಲ ಅಂದಿದ್ದರು. ಆಮೇಲೆ ಅದೆಂಥದೋ ಮರದ ಕೆಳಗೆ ಗಂಟೆಗಟ್ಟಲೆ ಕುಳಿತು ಹರಟೆ ಹೊಡೆದಿದ್ದರು. ಹಾಗೆ ತೇಜಸ್ವಿ. ಈಗ ವ್ಯಾಸರು. ನಾವೆಲ್ಲ ಸಾಹಿತ್ಯಕ ತಬ್ಬಲಿಗಳಾಗುತ್ತಿದ್ದೀವೇನೋ ಅನಿಸಿಬಿಟ್ಟಿದೆ.ಗೆಳೆಯ ವಿಠ್ಠಲ ಗಟ್ಟಿ ಉಳಿಯ ಅವರಿಗೆ ವ್ಯಾಸರು ಫೋನ್ ಮಾಡಿದಾಗಲೆಲ್ಲ ರವಿ ಅಜ್ಜೀಪುರ ಅವರನ್ನು ಕೇಳಿದೆ ಅಂತ ಹೇಳಿ. ಅವರು ಚೆನ್ನಾಗಿ ಬರೆಯುತ್ತಾರೆ. ಅವರ ಶೈಲಿ ಚೆನ್ನಾಗಿದೆ ಅನ್ನುತ್ತಿದ್ದರಂತೆ. ಪ್ರತಿ ಮೆಸ್ಸೇಜ್ನಲ್ಲೂ ನಮ್ಮ ಕ್ಷೇಮ ಸಮಾಚಾರ ವಿಚಾರಿಸುತ್ತಿದ್ರು. ಒಮ್ಮೆ ಹೋಗಿ ಅವರನ್ನು ನೋಡಿಕೊಂಡು ಬರೋಣ ಅಂತ ನಾನು ವಿಠ್ಠಲಗಟಿ ಉಳಿಯ ಮಾತಾಡಿಕೊಂಡಿದ್ದೆವು. ಅವರಿಗೆ ಫಸ್ಟ್ ಹಾಫ್ ಪುಸ್ತಕ ನೋಡಬೇಕೆಂಬ ಆಸೆ ತೀವ್ರವಾಗಿತ್ತು. ಆದ್ರೆ ಅದನ್ನು ನೋಡುವ ಮೋದಲೇ ಹೊರಟುಬಿಟ್ಟರಲ್ಲ ಅನ್ನುವ ವ್ಯಥೆ ಇನ್ನಿಲ್ಲದೇ ಕಾಡುತ್ತಿದೆ.
ಅವರ ಪ್ರೀತಿ ಅಜರಾಮರ. ಅವರು ಬರೆದ ಕಥೆಗಳೂ